ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಎಚ್ ಡಿ ಎಫ್ ಸಿ ಬ್ಯಾಂಕ್ನಿಂದ ಬಂಪರ್ ಸ್ಕಾಲರ್ಶಿಪ್.

ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಎಚ್ ಡಿ ಎಫ್ ಸಿ ಬ್ಯಾಂಕ್ನಿಂದ ಬಂಪರ್ ಸ್ಕಾಲರ್ಶಿಪ್.

ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳ ಶೈಕ್ಷಣಿಕ ಕನಸುಗಳನ್ನು ನನಸು ಮಾಡಿಕೊಳ್ಳುವ ಉದ್ದೇಶದಲ್ಲಿ ಎಚ್ ಡಿ ಎಫ್ ಸಿ ಪರಿವರ್ತನ್ ವಿದ್ಯಾರ್ಥಿವೇತನ 2025 ಈ ಯೋಜನೆಯನ್ನು ಪ್ರಾರಂಭಿಸಿದೆ. ಈ ಯೋಜನೆಯ ಅಡಿಯಲ್ಲಿ ಒಂದನೇ ತರಗತಿಯಿಂದ ಪಿಜಿವರೆಗಿನ ವಿದ್ಯಾರ್ಥಿಗಳಿಗೆ ₹15000 ಇಂದ ₹75,000ಗಳವರೆಗಿನ ಆರ್ಥಿಕ ಸಹಾಯಧನವನ್ನು ನೇರವಾಗಿ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆ ಮೂಲಕ ಕೊಡಲಾಗುವುದು. ಈ ವಿಷಯದ ಕುರಿತು ಸಂಪೂರ್ಣ ಮಾಹಿತಿ ಈ ಕೆಳಗಡೆ ನೀಡಲಾಗಿದೆ. ಪೂರ್ತಿಯಾಗಿ ಓದಿ ಇದರ ಸದುಪಯೋಗವನ್ನು ಪಡೆದುಕೊಳ್ಳಿ.

ಸ್ನೇಹಿತರೆ, ಪ್ರತಿನಿತ್ಯ ಇದೇ ರೀತಿಯ ಉಪಯುಕ್ತ ಮಾಹಿತಿಯನ್ನು ಪಡೆಯಲು ನಮ್ಮ ಕನ್ನಡ ಟ್ರೆಂಡಿಂಗ್ ವಾಟ್ಸಪ್ ಚಾನಲ್ ಅನ್ನು ಸೇರಿಕೊಳ್ಳಿ. ಸೇರಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ.

ಈ ಯೋಜನೆಯ ಉದ್ದೇಶವೇನು?

ಭಾರತದಲ್ಲಿ ಅನೇಕ ಪ್ರತಿಭಾವಂತ ವಿದ್ಯಾರ್ಥಿಗಳು ಆರ್ಥಿಕ ಸಂಕಷ್ಟದ ಕಾರಣ ತಮ್ಮ ಶಿಕ್ಷಣವನ್ನು ಅರ್ಧದಲ್ಲಿ ನಿಲ್ಲಿಸಬೇಕಾದ ಪರಿಸ್ಥಿತಿ ಉಂಟಾಗಿದೆ. ಇಂತ ವಿದ್ಯಾರ್ಥಿಗಳಿಗೆ ಸಹಾಯ ಮಾಡುವುದೇ ಈ ಯೋಜನೆಯ ಪ್ರಮುಖ ಉದ್ದೇಶ ಆಗಿದೆ. ವಿಶೇಷವಾಗಿ ಗ್ರಾಮೀಣ ಪ್ರದೇಶಗಳು, ಆದಿವಾಸಿ ಸಮುದಾಯ ಹಾಗೂ ಆರ್ಥಿಕವಾಗಿ ದುರ್ಬಲ ವರ್ಗದ ವಿದ್ಯಾರ್ಥಿಗಳಿಗೆ ಇದು ಒಂದು ದೊಡ್ಡ ಅವಕಾಶ ಎಂದು ಹೇಳಬಹುದು.

ಈ ಯೋಜನೆಯ ವಿವರಗಳೇನು?

ECSS ವಿದ್ಯಾರ್ಥಿ ವೇತನ:

WhatsApp Group Join Now
Telegram Group Join Now       
  • ಒಂದನೇ ತರಗತಿಯಿಂದ ಹತ್ತನೇ ತರಗತಿವರೆಗೆ ₹15,000 ವಿದ್ಯಾರ್ಥಿ ವೇತನ ನೀಡಲಾಗುವುದು.
  • ಏಳನೇ ತರಗತಿಯಿಂದ 12ನೇ ತರಗತಿವರೆಗೆ ₹18,000 ವಿದ್ಯಾರ್ಥಿ ವೇತನ ನೀಡಲಾಗುವುದು.
  • ಪದವಿ ಮತ್ತು ಸ್ನಾತಕೋತರ ವಿದ್ಯಾರ್ಥಿಗಳು ₹25,000 ವರೆಗೆ ವಿದ್ಯಾರ್ಥಿ ವೇತನ ನೀಡಲಾಗುತ್ತದೆ.
  • ಕನಿಷ್ಠ 55% ಅಂಕಗಳು ಮತ್ತು ಕುಟುಂಬದ ವಾರ್ಷಿಕ ಆದಾಯ ₹2.5 ಲಕ್ಷಕ್ಕಿಂತ ಕಡಿಮೆ ಹೊಂದಿರಬೇಕು.
ಇದನ್ನು ಓದಿ: ಕರ್ನಾಟಕ ರಾಜ್ಯ ಸರ್ಕಾರದಿಂದ ವಾಹನ ಖರೀದಿ ಮಾಡಲು ಸಿಗಲಿದೆ ಮೂರು ಲಕ್ಷ ರೂಪಾಯಿ ಸಹಾಯಧನ.

ಸಾಮಾನ್ಯ ಪದವಿ ವಿದ್ಯಾರ್ಥಿ ವೇತನವೇಷ್ಟು?

  1. ಬಿ.ಎ., ಬಿ.ಎ.ಸಿ., ಬಿಕಾಂ ಓದುತ್ತಿರುವ ವಿದ್ಯಾರ್ಥಿಗಳಿಗೆ ₹30,000 ಸಹಾಯಧನ ನೀಡಲಾಗುತ್ತದೆ.
  2. ಇದಕ್ಕೆ ಅರ್ಹತೆ ಕನಿಷ್ಠ 70% ಅಂಕಗಳು ಮತ್ತು ₹6 ಲಕ್ಷಕ್ಕಿಂತ ಕಡಿಮೆ ಆದಾಯ ಹೊಂದಿರಬೇಕು.

ಕೋವಿಡ್ ಸಂಕಷ್ಟ ಬೆಂಬಲ ವಿದ್ಯಾರ್ಥಿಯ ವೇತನ.

ಕೋವಿಡ್ ವೇಳೆಯಲ್ಲಿ ಕುಟುಂಬದ ಆದಾಯಕ್ಕೆ ಧಕ್ಕೆ ಬಂದ ವಿದ್ಯಾರ್ಥಿಗಳಿಗೆ ₹15,000 ಯಿಂದ ₹75,000 ವರೆಗೆ ಸಹಾಯಧನ ನೀಡಲಾಗುತ್ತದೆ. ಇದಕ್ಕೆ ಅರ್ಹತೆ ಎಂದರೆ ಕನಿಷ್ಠ 60% ಅಂಕಗಳನ್ನು ಪಡೆದಿರಬೇಕು.

ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ?

• ಎಚ್ ಡಿ ಎಫ್ ಸಿ ಬ್ಯಾಂಕ್ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ. ವೆಬ್ಸೈಟ್ hdfcbank.com/scholarships

WhatsApp Group Join Now
Telegram Group Join Now       

• ಪರಿವರ್ತನ್ ವಿದ್ಯಾರ್ಥಿ ವೇತನ 2025 ಅನ್ನು ಆಯ್ಕೆ ಮಾಡಿ.

• ಆನ್ಲೈನ್ ಅರ್ಜಿ ಫಾರ್ಮ್ ಅನ್ನು ಭರ್ತಿ ಮಾಡಿ.

• ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ.

• ಅರ್ಜಿಯನ್ನು ಸಲ್ಲಿಸಿ ಹಾಗೂ ಅರ್ಜಿ ಸಂಖ್ಯೆಯನ್ನು ಸುರಕ್ಷಿತವಾಗಿ ಇಟ್ಟುಕೊಂಡಿರಿ. ಬೇಕಾಗುವ ಅಗತ್ಯ ದಾಖಲೆಗಳು ಆಧಾರ್ ಕಾರ್ಡ್, ಮಾರ್ಕ್ಸ್ ಕಾರ್ಡ್, ಆದಾಯ ಪ್ರಮಾಣ ಪತ್ರ ಮತ್ತು ಬ್ಯಾಂಕ್ ವಿವರಗಳು.

ಇದನ್ನು ಓದಿ: ಪಿಎಂ ಕಿಸಾನ್ ಯೋಜನೆ ಆದಷ್ಟು ಬೇಗ ಈ ಒಂದು ಕೆಲಸ ಮಾಡಿ. ಇಲ್ಲದಿದ್ದರೆ 20ನೇ ಕಂತಿನ ಹಣ ಮತ್ತು ಮುಂಬರುವ ಕಂತುಗಳ ಹಣ ನಿಮ್ಮ ಖಾತೆಗೆ ಜಮಾ ಆಗುವುದಿಲ್ಲ.

ಅರ್ಜಿ ಸಲ್ಲಿಸಲು ಬೇಕಾಗುವ ಮುಖ್ಯ ದಾಖಲೆಗಳು.

• ಶಾಲೆ ಅಥವಾ ಕಾಲೇಜು ಪ್ರಮಾಣ ಪತ್ರ.

• ಆದಾಯ ಪ್ರಮಾಣ ಪತ್ರ ಇದು ತಶಿಲ್ದಾರ್ ಅಥವಾ ಗ್ರಾಮ ಪಂಚಾಯಿತಿ ಅಧಿಕಾರಿ ಪ್ರಮಾಣಿತವಾಗಿರಬೇಕು.

• ಬ್ಯಾಂಕ್ ಖಾತೆ ವಿವರ.

• ಹಿಂದಿನ ವರ್ಷದ ಅಂಕ ಪತ್ರ.

• ಪಾಸ್ಪೋರ್ಟ್ ಗಾತ್ರದ ಫೋಟೋ.

ಈ ಯೋಜನೆಯ ಪ್ರಮುಖ ವೈಶಿಷ್ಟ್ಯತೆಗಳೇನು?

• ಈ ಯೋಜನೆಗೆ ಅರ್ಜಿ ಸಲ್ಲಿಸಲು 100% ಆನ್ ಆನ್‌ಲೈನ್ ಅರ್ಜಿ ಪ್ರಕ್ರಿಯೆ ಇರುತ್ತದೆ.

• ವಿದ್ಯಾರ್ಥಿಗಳಿಗೆ ಮೆಂಟರ್ಶಿಪ್ ಹಾಗೂ ಕ್ಯಾರಿಯರ್ ಕೌನ್ಸಿಲಿಂಗ್ ಸೌಲಭ್ಯ ಇರುತ್ತದೆ.

• ವಿವಿಧ ಶೈಕ್ಷಣಿಕ ಹಂತಗಳಿಗೆ ಅನುಗುಣವಾದ ಸಹಾಯಧನ ನೀಡಲಾಗುತ್ತದೆ.

• ಮತ್ತು ಪಾರದರ್ಶಕ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ.

ಈ ಯೋಚನೆಯಲ್ಲಿ ಗಮನಿಸಬೇಕಾದ ಅಂಶಗಳು.

• ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಸೆಪ್ಟಂಬರ್ 30, 2025.

• ಆಯ್ಕೆ ಮಾಡಲಾಗಿರುವ ವಿದ್ಯಾರ್ಥಿಗಳ ಪಟ್ಟಿ ಅಕ್ಟೋಬರ್ 2025 ನಲ್ಲಿ ಪ್ರಕಟವಾಗುತ್ತದೆ.

• ಹಣವನ್ನು ನವೆಂಬರ್ 2025 ರಲ್ಲಿ ವರ್ಗಾವಣೆ ಮಾಡಲಾಗುತ್ತದೆ.

• ಇಲ್ಲಿ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ.

ಸಹಾಯ ಮತ್ತು ಸಂಪರ್ಕ ಹೇಗೆ?

ಈ ವಿದ್ಯಾರ್ಥಿ ವೇತನದ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಟೋಲ್ ಫ್ರೀ ನಂಬರ್ 1800-123-1234

email: www.hdfcbank.com/scholarships

ಈ ಯೋಜನೆಯು ದೇಶದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳು ಇದ್ದಿದ್ದಾರೆ, ಆದರೆ ಆರ್ಥಿಕವಾಗಿ ದುರ್ಬಲವಾಗಿ ಇರುವಂತ ವಿದ್ಯಾರ್ಥಿಗಳ ಶಿಕ್ಷಣದ ಆದಿಯಲ್ಲಿ ದೊಡ್ಡ ಮೈಲಿಗಲ್ಲು ಎನಿಸುತ್ತದೆ. ಆದ್ದರಿಂದ ಸರಿಯಾದ ಸಮಯದಲ್ಲಿ ಅರ್ಜಿ ಸಲ್ಲಿಸಿ ನಿಮ್ಮ ಶೈಕ್ಷಣಿಕ ಕನಸುಗಳನ್ನು ನನಸಾಗಿಸಿಕೊಳ್ಳಲು ಈ ಅವಕಾಶವನ್ನು ಚೆನ್ನಾಗಿ ಸದುಪಯೋಗ ಮಾಡಿಕೊಳ್ಳಿ. ನೀವು ಅರ್ಹ ವಿದ್ಯಾರ್ಥಿಗಳು ಆಗಿದ್ದರೆ, ತಪ್ಪದೆ ಅರ್ಜಿ ಸಲ್ಲಿಸಿ.

ಸ್ನೇಹಿತರೆ, ಪ್ರತಿನಿತ್ಯ ಇದೇ ರೀತಿಯ ಉಪಯುಕ್ತ ಮಾಹಿತಿಯನ್ನು ಪಡೆಯಲು ನಮ್ಮ ಕನ್ನಡ ಟ್ರೆಂಡಿಂಗ್ ವಾಟ್ಸಪ್ ಚಾನಲ್ ಅನ್ನು ಸೇರಿಕೊಳ್ಳಿ. ಸೇರಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ.

Leave a Comment