ವಿಕಲಚೇತನರು ಹಾಗೂ ಹಿರಿಯ ನಾಗರೀಕರ ಸಂಸ್ಥೆಗಳ ನೋಂದಣಿಯ ಮಾದರಿ ಬದಲು
ಕರ್ನಾಟಕದಲ್ಲಿ ಆನ್ಲೈನ್ ನಲ್ಲಿ ಇವಾಗ ಪ್ರಮಾಣ ಪತ್ರ ಕಡ್ಡಾಯ
ಕರ್ನಾಟಕದಲ್ಲಿ ವಿಕಲಚೇತನರು ಮತ್ತು ಹಿರಿಯ ನಾಗರೀಕರ ಕುರಿತು ಕೆಲಸ ಮಾಡುವ ಸ್ವಯಂ ಸೇವಾ ಸಂಘಟನೆಯ ನೋಂದಣಿಯನ್ನು ಇನ್ನು ಮುಂದೆ ಆನ್ಲೈನ್ ನಲ್ಲಿ ಕಡ್ಡಾಯವಾಗಿ ಮಾಡಿಸಲೇ ಬೇಕು. ಈ ಕುರಿತು ಇಲಾಖೆ ಆದೇಶ ಮಾಡಿದೆ.
ಬೆಂಗಳೂರು:ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ವಿಕಲಚೇತನರು ಮತ್ತು ಹಿರಿಯ ನಾಗರೀಕರ ಉಸ್ತುವಾರಿ ಹಾಗೂ ಸೇವಾ ಚಟುವಟಿಕೆಗಳನ್ನು ನೋಡಿಕೊಳ್ಳುತ್ತಿರುವ ಮತ್ತು ವೃದ್ದಾಶ್ರಮ ನಡೆಸುತ್ತಿರುವ ಸಂಘಟನೆಗಳಿಗೆ ನೋಂದಣಿಯ ರೀತಿಯನ್ನು ಬದಲಾಯಿಸಲಾಗಿದೆ.ಮ್ಯಾನುಯಲ್ ಬದಲಾಗಿ ಆನ್ಲೈನ್ ಮುಖಾಂತರ ಕಡ್ಡಾಯವಾಗಿ ನೋಂದಣಿ ಮಾಡಿಸಿಕೊಳ್ಳಲು ವ್ಯವಸ್ಥೆ ವಿಕಲಚೇತನರ ಮತ್ತು ರಾಜ್ಯದ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಮಾಡಿದೆ. ಇದಕ್ಕಾಗಿ ಕಡ್ಡಾಯವಾಗಿ ಸ್ವಯಂ ಸೇವಾ ಸಂಘಟನೆಗಳು ಮತ್ತು ಸಂಸ್ಥೆಗಳು ಪಾಲಿಸಬೇಕಾದ ಸೂಚನೆಗಳ ಪಟ್ಟಿಯು ಬಿಡುಗಡೆ ಮಾಡಲಾಗಿದೆ. ಅದಲ್ಲದೇ ನೋಂದಣಿ ಮಾಡಿಸಿಕೊಳ್ಳುವ ನಿಟ್ಟಿನಲ್ಲಿ ಪಾಲಿಸಬೇಕಾದ ಕ್ರಮಗಳ ಕುರಿತಾಗಿಯೂ ತಿಳಿಸಲಾಗಿದೆ.
ವಿಕಲಚೇತನರ ಮತ್ತು ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು ಸೇವಾಸಿಂಧು ಪೋರ್ಟಲ್ನಲ್ಲಿ ಅಧಿಕೃತ ವೆಬ್ಸೈಟ್ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು ಆ ಬಳಿಕ ನೋಂದಣಿ ಪ್ರಮಾಣ ಪತ್ರ ಪಡೆಯಬೇಕು. ಕರ್ನಾಟಕದಲ್ಲಿ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳಿಗೆ ಇದಕ್ಕೂ ಮುಂಚೆ ಮ್ಯಾನುಯಲ್ ಆಗಿ ವಿತರಿಸಲಾಗುತ್ತಿದ್ದ ಈ ನೋಂದಣಿ ಪ್ರಮಾಣ ಪತ್ರಗಳನ್ನು ರದ್ದುಗೊಳಿಸಲು ಆದೇಶಿಸಲಾಗಿದೆ.ವಿದ್ಯುನ್ಮಾನ ನಾಗರಿಕ ಸೇವಾ ವಿತರಣ ನಿರ್ದೇಶನಾಲಯ ಈ ಆಡಳಿತ ಇಲಾಖೆಯ ಸೇವಾ ಸಿಂಧು ಯೋಜನೆಯ ಅಡಿಯಲ್ಲಿ ನೋಂದಣಿ ಮಾಡಿಸಲು ಆನ್ಲೈನ್ ನ ತಂತ್ರಾಂಶ ಅಭಿವೃದ್ದಿ ಪಡಿಸಿದ್ದಾರೆ, ಈ ತಂತ್ರಾಂಶ ಬಳಸಿ ಸ್ವಯಂ ಸೇವಾ ಸಂಸ್ಥೆಗಳಿಗೆ ನೋಂದಣಿ, ನವೀಕರಣ ಪ್ರಮಾಣ ಪತ್ರ ವಿತರಿಸಲಾಗುವುದು ಎಂದು ಹೇಳಲಾಗುತ್ತಿದೆ.
ಇದರ ಹಿನ್ನೆಲೆಯಲ್ಲಿ ಎಲ್ಲಾ ಜಿಲ್ಲೆಗಳಲ್ಲಿ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಹಾಗೂ ಹಿರಿಯ ನಾಗರಿಕರ ವೃದ್ದಾಶ್ರಮಗಳನ್ನು ನಡೆಸುತ್ತಿರುವ ಎಲ್ಲಾ ಅನುದಾನಿತ/ಅನುದಾನರಹಿತ ಸ್ವಯಂ ಸೇವಾ ಸಂಸ್ಥೆಗಳು ಆನ್ಲೈನ್ ಮೂಲಕ ಅಧಿಕೃತ ವೆಬ್ಸೈಟ್ https://sevasindhu.karnataka.gov.in ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಿ ನೋಂದಣೆ ಮಾಡಿಸಿ, ಪ್ರಮಾಣ ಪತ್ರ ಪಡೆಯಬೇಕೆಂದು ಈ ಮೂಲಕ ತಿಳಿಸಲಾಗಿದೆ.
ಇದನ್ನು ಓದಿ: ಕೇಂದ್ರದಿಂದ ಪಿಂಚಣಿ ಯೋಜನೆ ಅನಾವರಣ, ಆಯ್ಕೆಯಾದ ಹಿರಿಯ ನಾಗರಿಕರಿಗೆ ತಿಂಗಳಿಗೆ 7,000 ಪಿಂಚಣಿ
- ಇನ್ನೂ ಹೆಚ್ಚಿನ ವಿವರಕ್ಕಾಗಿ ಮತ್ತು ಹೆಚ್ಚಿನ ಮಾಹಿತಿಗಾಗಿ ನಿಮ್ಮ ನಿಮ್ಮ ಜಿಲ್ಲೆಗಳಲ್ಲಿರುವ ಜಿಲ್ಲಾ ವಿಕಲಚೇತನರ ಮತ್ತು ಹಿರಿಯನಾಗರಿಕರ ಸಬಲೀಕರಣ ಇಲಾಖೆ ಕಚೇರಿಗೆ ಭೇಟಿ ನೀಡಿ ಇನ್ನೂ ಹೆಚ್ಚಿನ ವಿವರಗಳನ್ನು ತಿಳಿದುಕೊಳ್ಳಿ ಎಂದು ಅಂಗವಿಕಲರ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.
ಸ್ನೇಹಿತರೆ ಇದೇ ರೀತಿಯ ಉಪಯುಕ್ತ ಮಾಹಿತಿಯನ್ನು ಪಡೆದುಕೊಳ್ಳಲು ನಮ್ಮ ಕನ್ನಡ ಟ್ರೆಂಡಿಂಗ್ ವಾಟ್ಸಪ್ ಚಾನಲ್ ಅನ್ನು ಸೇರಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ